`ನೈಟ್ ಕರ್ಪ್ಯೂ’ ಜಾರಿ ಇಲ್ಲ : ಸಿಎಂ

`ನೈಟ್ ಕರ್ಪ್ಯೂ’ ಜಾರಿ ಇಲ್ಲ : ಸಿಎಂ

ಬೆಂಗಳೂರು : ರಾಜ್ಯದಲ್ಲಿ ಹೊಸ ಕೊರೋನಾ ವೈರಸ್ ಭೀತಿ ಹಿನ್ನೆಲೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.

ಕೊರೋನಾ ರೂಪಾಂತರ ಜನರನ್ನು ಆತಂಕಕ್ಕೀಡುಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದರು.

 

Related