ಸಿದ್ದರಾಮಯ್ಯ ಸಿಎಂ ಆದ ಮೇಲೆ ರಾಜ್ಯದಲ್ಲಿ ಮಳೆಯೇ ಇಲ್ಲ: ಸತೀಶ್ ರೆಡ್ಡಿ

ಸಿದ್ದರಾಮಯ್ಯ ಸಿಎಂ ಆದ ಮೇಲೆ ರಾಜ್ಯದಲ್ಲಿ ಮಳೆಯೇ ಇಲ್ಲ: ಸತೀಶ್ ರೆಡ್ಡಿ

ಬೊಮ್ಮನಹಳ್ಳಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಮೇಲೆ ಮಳೆಯೇ ಇಲ್ಲದಂತಾಗಿದೆ. ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಏರಿದ ಮೇಲೆ ರಾಜ್ಯದಲ್ಲಿ ಬರಗಾಲ ಎದುರಾಗಿತ್ತು. ಈ ಬಾರಿಯೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಏರಿದಾಗಿನಿಂದ ರಾಜ್ಯದಲ್ಲಿ ಸರಿಯಾಗಿ ಮಳೆ ಬಂದಿಲ್ಲ ಎಂದು ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಹೇಳಿದ್ದಾರೆ.

ಇಂದು (ಭಾನುವಾರ ಏ.14) ಬೊಮ್ಮನಹಳ್ಳಿ, ಫಿರಂಗಿಪಾಳ್ಯದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ, ಅಂಬೇಡ್ಕರ್ ಭವನ ಉದ್ಘಾಟನೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ಮಳೆಯಿಂದ ಕೆರೆ ಕಟ್ಟೆಗಳೆಲ್ಲ ತುಂಬಿದ್ದವು, ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆದ ಮೇಲೆ ರಾಜ್ಯದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಕುಡಿಯಲು ನೀರಿಲ್ಲದಿದ್ದರೂ ಕೂಡ ಪುಣ್ಯಾತ್ಮ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಬಿಟ್ಟರು. ಈಗ ನಮ್ಮ ರಾಜ್ಯದ ಜನತೆ ಕುಡಿಯುವ ನೀರಿಗೆ ಪರದಾಡುವಂಥ ಪರಿಸ್ಥಿತಿ ತಂದಿದ್ದಾರೆ.

ಇನ್ನು ಕಂದಾಯ ಸಚಿವರಾಗಿರುವಂತ ಕೃಷ್ಣಬೈರೇಗೌಡ ಅವರು ಹೇಳುತ್ತಾರೆ, ತಮಿಳುನಾಡಿಗೆ ಈ ಬಾರಿ ಹೆಚ್ಚುವರಿ ನೀರನ್ನು ಬಿಟ್ಟಿದ್ದೇವೆ ಅಂತ. ಸುಮಾರು 407 ಟಿಎಂಸಿ ನೀರನ್ನು ಈಗಾಗಲೇ ತಮಿಳುನಾಡಿಗೆ ಬಿಟ್ಟಿದ್ದೇವೆ ಅಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಹೇಳುತ್ತಾರೆ.

ಕಾಂಗ್ರೆಸ್ ನವರಿಗೆ ಮಾನ ಮರ್ಯಾದಿ ಅನ್ನೋದೇ ಇಲ್ವಾ? ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡೋಕೆ ಯಾರು ಹೇಳಿದ್ದು? ಜ್ಞಾನ ಇಲ್ವಾ ನಿಮಗೆ. ಇನ್ನೊಂದು ತಿಂಗಳು ಮಳೆ ಬಾರದೆ ಇದ್ರೆ ಡ್ಯಾಂಗಳಿಂದ ಮಣ್ಣಿನ ಬುರದೆ ನೀರು ಬರುತ್ತೆ. ಇಂತಹ ಪರಿಸ್ಥಿತಿಯನ್ನ ಈ ಸರ್ಕಾರ ಮಾಡಿಟ್ಟಿದೆ. ಮಾನ ಮರ್ಯದೆ ಇದ್ರೆ ಬೆಂಗಳೂರಿನ ಜನರಿಗಾಗಿರುವ ನೀರಿನ ಸಮಸ್ಯೆ ಬಗೆಹರಿಸಿ ನೀರು ಕೊಟ್ಟು ಆಮೇಲೆ ವೋಟ್ ಕೇಳೋಕೆ ಕಾಂಗ್ರೇಸ್ ನವರು ಬನ್ನಿ. ಸರ್ಕಾರ ನಡೆಸುತ್ತಿರುವ ಕಾಂಗ್ರೇಸ್ ನವರು ನೀರಿನ ಸಮಸ್ಯೆ ಬಗ್ಗೆ ಅರಿತುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಕಾಂಗ್ರೆಸ್ಸಿಗರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Related