ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಸಭೆ ಕರೆದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ, ಏ. 18 : ದೇಶದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಸಭೆ ಕರೆದಿದ್ದಾರೆ. ದೇಶದಲ್ಲಿ ದಿನೇ ದಿನೇ ದೇಶದಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದೆ. ನೌಕಾಪಡೆಯೂ ಕೊರೊನಾ ವೈರಸ್ ನಿಂದ ತತ್ತರಿಸುತ್ತಿದೆ. ಈ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಳಿಗ್ಗೆ 11ಕ್ಕೆ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ , ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Related