ಬೆಂಗಳೂರು: ಬೆಳ್ಳಂಬೆಳ್ಳ ಗೆ ಸುಖ ನಿದ್ದೆಯಲ್ಲಿ ಜಾರಿದ ಬೇನಾಮಿ ಆಸ್ತಿ ಮಾಡಿದ ಅಧಿಕಾರಿಗಳ ಮನೆಗಳ ಮೇಲೆ ಇಂದು ಲೋಕಾಯುಕ್ತ ದಿಡೀರ್ ದಾಳಿ ಮಾಡಿದೆ.
ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬೆಂಗಳೂರಿನ ಪಾಲಿಕೆ ಮುಖ್ಯ ಎಂಜಿನಿಯರ್ ರಂಗನಾಥ್ಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ರಾಜ್ಯದ 58 ಕಡೆಗಳಲ್ಲಿ 13 ಮಂದಿ ಎಸ್ಪಿಗಳು, 12 ಮಂದಿ ಡಿವೈಎಸ್ಪಿ 25 ಪಿಐ ಸೇರಿದಂತೆ 130 ಅಧಿಕಾರಿಗಳು ದಾಳಿ ನಡೆಸಿದ್ದಾರೆ
ಅಕ್ರಮ ಆಸ್ತಿ ಗಳಿಕೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗಡಿ ಜಿಲ್ಲೆ ಬೀದರ್ನಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಏಕಕಾಲಕ್ಕೆ ಬೀದರ್ನಲ್ಲಿ ಮೂರು ಕಡೆ ಹಾಗೂ ಕಲಬುರಗಿಯಲ್ಲಿ ಒಂದು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಕಾರಂಜಾ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶಿವಕುಮಾರ ಸ್ವಾಮಿಯ ನಿವಾಸಗಳು ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.