ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಲ್ಕನೇ ಬಾರಿ ಸತತವಾಗಿ ಗೆಲ್ಲುವ ಮೂಲಕ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಆರಂಭ ಹಂತದಲ್ಲಿ ಮನ್ಸೂರ್ ಅಲಿಖಾನ್ ಅವರು ಗೆಲುವಿನ ನಿರೀಕ್ಷೆಯನ್ನು ಹೊಂದಿದ್ದರು. ಆದರೆ ಅಚ್ಚರಿ ರೀತಿಯಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಅವರು ಗೆಲುವಿನ ನಗೆಯನ್ನು ಬೀರಿದರೆ.
ಹೌದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ 4ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನೆಡೆ ಅನುಭವಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆದ್ದೆ ಗೆಲ್ಲುತ್ತಾರೆ ಎನ್ನಲಾಗುತಿತ್ತು. ಇದನ್ನೂ ಓದಿ: ಡಿಕೆ ಬ್ರದರ್ಸ್ ದಬ್ಬಾಳಿಕೆಗೆ ಜನ ಬ್ರೇಕ್ ಹಾಕಿದ್ದಾರೆ: ಎಚ್ ಡಿಕೆ
ಆದರೆ, ಅಂತಿಮ ಹಂತದಲ್ಲಿ ವಿಜಯಲಕ್ಷ್ಮಿ ಪಥ ಬದಲಾಯಿಸಿದ್ದು, ಮಹದೇವಪುರ, ಸಿ.ವಿ.ರಾಮನ್ ನಗರದಲ್ಲಿ ಪಿ.ಸಿ.ಮೋಹನ್ ಗೆ ಹೆಚ್ಚಿನ ಮತಗಳು ಸಿಕ್ಕಿದ್ದು 35 ರಿಂದ 40 ಸಾವಿರ ಲೀಡ್ ನಿಂದ ಗೆಲುವು ಸಾಧಿಸಿದ್ದಾರೆ.
ಒಂದೂವರೆ ದಶಕಗಳ ಇತಿಹಾಸ ಹೊಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಆರಂಭದಿಂದಲೂ ಬಿಜೆಪಿಯೇ ಗೆಲುವು ಸಾಧಿಸುತ್ತಿದೆ. ಮಾತ್ರವಲ್ಲದೇ, ಒಬ್ಬರೇ ಸಂಸದರಾಗಿ ಮುಂದುವರೆದಿರುವುದು ವಿಶೇಷ.