ಬಿಬಿಎಂಪಿ ಚುನಾವಣೆಗೆ ಪಕ್ಷ ಸಿದ್ಧ- ಬೈರತಿ ಬಸವರಾಜ

ಬಿಬಿಎಂಪಿ ಚುನಾವಣೆಗೆ ಪಕ್ಷ ಸಿದ್ಧ- ಬೈರತಿ ಬಸವರಾಜ

ಬೆಂಗಳೂರು : ಬಿಬಿಎಂಪಿ ಚುನಾವಣೆಗೂ ಬಿಜೆಪಿ ಸಿದ್ಧವಿದೆ. ಚುನಾವಣೆ ಎದುರಿಸಲು ನಾವೆಲ್ಲರೂ ಸಿದ್ದರಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಶುಕ್ರವಾರ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.

 

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, ಪ್ರಶ್ನೆಗಳಿಗೆ ಉತ್ತರಿಸಿ ಕೆಲವೆಡೆ ವಾರ್ಡ್ ಗಳು ಅತ್ಯಂತ ಹೆಚ್ಚು ಮತದಾರರನ್ನು ಹೊಂದಿವೆ. ಆದ್ದರಿಂದ ಈ ವಾರ್ಡ್ ಗಳ ವ್ಯಾಪ್ತಿಯ ಮರು ವಿಂಗಡಣೆ ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಪಕ್ಷ ನಿರ್ಧರಿಸಲಿದೆ ಎಂದು ತಿಳಿಸಿದರು. ಇವೆರಡೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related