ರಾಯಚೂರು: ಕರ್ನಾಟಕ ಸರ್ಕಾರದಿಂದ ನಿನ್ನೆ ಹೈದರಾಬಾದ್ ಕರ್ನಾಟಕ ವಿಭಾಗದ ವಿದ್ಯಾರ್ಥಿಗಳಿಗೆ ಪಿಡಿಒ ಪರೀಕ್ಷೆ ನಡೆಸಲಾಗಿದ್ದು, ಪಿಡಿಒ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸಿಂಧನೂರು ಟೌನ್ ಪೊಲೀಸ್ ಠಾಣೆಯಲ್ಲಿ 12 ಪರೀಕ್ಷಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.
ಹೌದು, 16 ಮತ್ತು 17ನೇ ತಾರೀಖಿನಂದು ನಡೆಸಲಾದ ಹೈದರಾಬಾದ್ ಕರ್ನಾಟಕ ವಿಭಾಗದ ವಿದ್ಯಾರ್ಥಿಗಳಿಗೆ ಪಿಡಿಓ ಪರೀಕ್ಷೆ ನಡೆಸಲಾಗಿದ್ದು ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ ಎಂದು ವಿದ್ಯಾರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಡಿಸೆಂಬರ್ ನಲ್ಲಿ ನಾಗಚೈತನ್ಯ 2ನೇ ಮದುವೆ!
ಇನ್ನು ಪರೀಕ್ಷಾ ಮೇಲ್ವಿಚಾರಕ ಬಸವರಾಜ ತಡಕಲ್ರಿಂದ ದೂರು ನೀಡಿದ್ದು, ಪಶುಪತಿ, ಬಾಬು, ಅಯ್ಯನಗೌಡ, ಅಮಿತ್, ವೆಂಕಟೇಶ್ ಸೇರಿ 12 ಜನರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಎಲ್ಲಾ 12 ಜನರು ಯಾದಗಿರಿ ಮೂಲದರು ಎನ್ನಲಾಗಿದೆ. ಸುಳ್ಳು ಸುದ್ದಿ ಹಬ್ಬಿಸಿರುವುದು, ಪ್ರಚೋದನೆ, ರಸ್ತೆ ತಡೆದು ಪ್ರತಿಭಟನೆ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಪಶುಪತಿ ಎಂಬ ಅಭ್ಯರ್ಥಿ ಘಟನೆಗೆ ಕಾರಣ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕೊಠಡಿ ಸಂಖ್ಯೆ 05 ರಲ್ಲಿದ್ದ ಅಭ್ಯರ್ಥಿ ಪಶುಪತಿ, ಪರೀಕ್ಷೆ ಬುಕ್ ಲೆಟ್ ನೀಡುವ ವೇಳೆ ನಮ್ಮ ಎದುರು ಸೀಲ್ ಓಪನ್ ಮಾಡಿಲ್ಲ. ಮೊದಲೇ ಓಪನ್ ಮಾಡಿದ್ದಿರಿ ಅಂತ ಪರೀಕ್ಷಾ ಸಂಯೋಜಕರೊಂದಿಗೆ ವಾಗ್ವಾದ ಮಾಡಿದ್ದಾರೆ. ಬಳಿಕ ಇತರೆ ರೂಂ ಗಳಿಗೆ ತೆರಳಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಅಂತ ಎಲ್ಲರನ್ನ ಸೇರಿಸಿ ಗಲಾಟೆಗೆ ಕಾರಣವಾದ ಆರೋಪ ಮಾಡಲಾಗಿದೆ. ಹೀಗಾಗಿ ಪಶುಪತಿಯನ್ನು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ಪೊಲೀಸರು ಬಿಟ್ಟಿದ್ದಾರೆ.