ದುರಹಂಕಾರ ತೋರಿದವರಿಗೆ ಜನ ಮತ ಹಾಕುವುದಿಲ್ಲ

ದುರಹಂಕಾರ ತೋರಿದವರಿಗೆ ಜನ ಮತ ಹಾಕುವುದಿಲ್ಲ

ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿತ್ತುದ್ದು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಕಣಕ್ಕಿಳಿಸಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಒಲವು ತೋರಿದ್ದಾರೆ. ಆದರೆ ಇದಕ್ಕೆ ಜಿಎಸ್ ಬಸವರಾಜ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರು ಕೂಡ ನಾವು ಅವರ ಪರ ಕೆಲಸ ಮಾಡುತ್ತೇವೆ. ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್‌ ನೀಡಿದರೆ ಫಲಿತಾಂಶದ ಬಗ್ಗೆ ಈಗಲೇ ಏನೂ ಹೇಳಲು ಆಗುವುದಿಲ್ಲ. ಕಳೆದ ಚುನಾವಣೆಯಲ್ಲಿ ಅವರು ಸೋತಿದ್ದಾರೆ. ದುರಹಂಕಾರ ತೋರಿದವರಿಗೆ ಜನ ಮತ ಹಾಕುವುದಿಲ್ಲ. ಹೈಕಮಾಂಡ್‌ ನಾಯಕರು ಜನಾಭಿಪ್ರಾಯ ನೋಡಿಕೊಂಡು ಅಭ್ಯರ್ಥಿಯನ್ನು ಘೋಷಿಸುತ್ತಾರೆ ಎಂದರು.

 

Related