45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ

45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ

ವಿಜಯಪುರ: ದಿನೇ ದಿನೇ ಕೋವಿಡ್ 2ನೇ ಅಲೆ ಹೆಚ್ಚಾಗುತ್ತಿದ್ದು, 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವಂತೆ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಕರೆ ನೀಡಿದರು.
ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಿದ ಚಾಲುಕ್ಯ ನಗರದ ಮಹೇಶ್ವರಿ ಮಂಗಲ ಕಾರ್ಯಾಲಯದ ಮುಂದೆ ಪ್ರಜಾಪಿತ ಬ್ರಹ್ಮಕುಮಾರಿ ವಿ.ವಿ.ಯ ಸಮುದಾಯ ಭವನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ನಂತರ ಇಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಮಾತನಾಡಿದರು.

ನಗರದ ಮಠಪತಿಗಲ್ಲಿಯ ಆದಿಶಕ್ತಿ ಸಭಾಭವನದಲ್ಲಿ ಮಾತನಾಡಿದ ಅವರು ವಿಶ್ವ ಹಾಗೂ ದೇಶಾದ್ಯಂತ ಕೋವಿಡ್ ಎರಡನೇ ಅಲೆ ಆರಂಭವಾಗಿದೆ. ಎಲ್ಲರೂ ಜಾಗೃತರಾಗಿ ಇರುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ನಿರ್ಲಕ್ಷದಿಂದ ಮಾರಕ ರೋಗಕ್ಕೆ ತುತ್ತಾದಲ್ಲಿ ಸಮಸ್ಯೆ ಎದುರಿಸಬಹುದಾಗಿದ್ದು ಜಾಗೃತರಾಗಿ ತಕ್ಷಣ ಲಸಿಕೆ ತಪ್ಪದೇ ಪಡೆಯುವಂತೆ ಸಲಹೆ ನೀಡಿದರು.

ಭಾರತದಲ್ಲೇ ಅಭಿವೃದ್ಧಿ ಪಡಿಸಿದ ಅತ್ಯಂತ ಸುರಕ್ಷಿತ ಹಾಗೂ ಕೊರೋನಾ ಲಸಿಕೆಯನ್ನು ಎಲ್ಲ ಹಿರಿಯ ನಾಗರಿಕರು ಹಾಗೂ ಅರ್ಹ ವ್ಯಕ್ತಿಗಳು ಪಡೆದುಕೊಳ್ಳಲು ಜಾಗೃತಿ ಮೂಡಿಸಿ, ಸ್ವಯಂಪ್ರೇರಿತವಾಗಿ ಲಸಿಕೆ ಪಡೆದು ಭಾರತವನ್ನು ಕೊರೋನಾ ಮುಕ್ತವಾಗಿಸಲು ಸಹಕರಿಸಿ ಎಂದು ನಾಗರಿಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ವೈದ್ಯಾಧಿಕಾರಿ ಅಗರವಾಲ, ಮುಖಂಡರು ಇದ್ದರು.

Related