ರಾಜವಂಶಸ್ಥರ ಪುತ್ಥಳಿಗೆ ಪುಷ್ಪಾರ್ಚನೆ..

ರಾಜವಂಶಸ್ಥರ ಪುತ್ಥಳಿಗೆ ಪುಷ್ಪಾರ್ಚನೆ..

ಬೆಂಗಳೂರು, ಆಗಸ್ಟ್ 01: ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಅವರು ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಬಹದ್ದೂರ್ ಅವರ ಪುತ್ಥಳಿಗೆ ಮೈಸೂರು ರಾಜವಂಶಸ್ಥರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಪುಷ್ಪಾರ್ಚನೆ ಮಾಡಿದರು.

ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಶ್ರೀ ಬಸವರಾಜ ನಾಯಕ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಪಿ.ಮಣಿವಣ್ಣನ್, ಕೇಂದ್ರ ಪರಿಹಾರ ಸಮಿತಿ ಕಾರ್ಯದರ್ಶಿ ಶ್ರೀಮತಿ ವೈ.ಬಿ.ಅರ್ಚನಾ ಮುಂತಾದವರು ಉಪಸ್ಥಿತರಿದ್ದರು.

Related