ನವದೆಹಲಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಗುರುವಾರ ಚಾಲನೆ ನೀಡಿದ್ದಾರೆ. ಡಿಜಿಟಲ್ ವೇದಿಕೆ ಮೂಲಕ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿದ್ದು, ಇದೇ ವೇಳೆ ರೈತರ ನೇರ ಬಳಕೆಗಾಗಿ ಸಮಗ್ರ ತಳಿ ಸುಧಾರಣಾ ಮಾರುಕಟ್ಟೆ ಮತ್ತು ಮಾಹಿತಿ ಪೋರ್ಟಲ್ ಇ-ಗೋಪಾಲ ಆ್ಯಪ್ ಅನ್ನೂ ಉದ್ಘಾಟಿಸಿದ್ದಾರೆ.
ಸಮಾರಂಭದಲ್ಲಿ ಬಿಹಾರದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಮೀನುಗಾರಿಕೆ ಹಾಗೂ ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆ ಸಹಾಯಕ ಸಚಿವರು ಭಾಗಿಯಾಗಿದ್ದಾರೆಂದು ವರದಿಗಳು ತಿಳಿಸಿದರು.