ದೆಹಲಿಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು..!!

  • In Crime
  • June 1, 2022
  • 346 Views
ದೆಹಲಿಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು..!!

ಹಿಜಾಬ್ ಗಲಾಟೆ ವೇಳೆ ಶಿವಮೊಗ್ಗ ಕಾಲೇಜಿನ ಧ್ವಜಸ್ತಂಭದ ಮೇಲೆ ಕೆಲ ಪುಂಡ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರು. ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ್ದ ವೇಳೆ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ದೆಹಲಿಯ ನಾರ್ಥ್ ಅವೆನ್ಯೂ ಠಾಣೆಯಲ್ಲಿ ಈಶ್ವರಪ್ಪ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.  ಕೆ.ಎಸ್.ಈಶ್ವರಪ್ಪ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಅಧಿವೇಶನದ ವೇಳೆ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು.

ಕಾಂಗ್ರೆಸ್ ನವರು ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಆದರೆ ಅಲ್ಲಿ ಹಾಗೆ ನಡೆದಿಲ್ಲ. ಕೇಸರಿ ಧ್ವಜವನ್ನು ಎಲ್ಲಿ ಬೇಕಾದರೂ ಹಾಕಬಹುದು. ಇಂದಲ್ಲ ನಾಳೆ ಕೆಂಪು ಕೋಟೆಯಲ್ಲೂ ಕೇಸರಿ ಧ್ವಜ ಹಾರಬಹುದು. ಇವತ್ತೆ ಅಂತ ಹೇಳುತ್ತಿಲ್ಲ. ಮುಂದೊಂದು ದಿನ ಈ ಘಟನೆ ನಡೆಯಬಹುದು ಅಂತ ಹೇಳಿದ್ದರು.

Related