ಕಲಾವಿದರ ಕೈಯಲ್ಲರಳಿತು ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರ ಭಾವಚಿತ್ರ

ಕಲಾವಿದರ ಕೈಯಲ್ಲರಳಿತು ಟೀಮ್ ಇಂಡಿಯಾ ಕ್ರಿಕೆಟ್ ಆಟಗಾರರ ಭಾವಚಿತ್ರ

ಮುಂಬೈ: ಟೀಮ್ ಇಂಡಿಯಾ ಆಟಗಾರರು ಟಿ 20 ವಿಶ್ವಕಪ್ ಗೆದ್ದ ಮೇಲೆ ಇದೆ ಮೊದಲ ಬಾರಿಗೆ ಭಾರತಕ್ಕೆ ಮರಳುತ್ತಿದ್ದು ಮುಂಬೈನಲ್ಲಿ ಕ್ರಿಕೆಟ್ ತಂಡದ ವಿಜಯ ಯಾತ್ರೆಯನ್ನು ಕೈಗೊಳ್ಳಲಾಗಿದೆ.

ಈಗಾಗಲೇ ಇದರ ಬಗ್ಗೆ ಭರ್ಜರಿ ಸಿದ್ಧತೆಗಳ ನಡೆಯುತ್ತಿದ್ದು, ಟೀಮ್ ಇಂಡಿಯ ಆಟಗಾರರ ಭಾವಚಿತ್ರವನ್ನು ರಾರಾಜಿಸುತ್ತಿವೆ. ಇದಲ್ಲದೆ ಚಿತ್ರಕಲಾವಿದರು ತಮ್ಮ ಕೈಯಂಚಿನಲ್ಲಿ ಕುಂಚ ಹಿಡಿದು ಕ್ರಿಕೆಟ್ ಆಟಗಾರರ ಚಿತ್ರ ಬಿಡಿಸಿರುವುದಂತು ಎಲ್ಲರ ಕಣ್ಣು ಕುಕ್ಕುತ್ತಿದೆ.

ಹೌದು, ಇಂದು (ಗುರುವಾರ ಜುಲೈ 04) ರಂದು ಮುಂಬೈನಲ್ಲಿ ನಿಗದಿಯಾಗಿರುವ ಭಾರತೀಯ ಕ್ರಿಕೆಟ್ ತಂಡದ ‘ವಿಜಯ ಯಾತ್ರೆ’ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಮುಂಚಿತವಾಗಿ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮರಳಿದ ಟೀಮ್ ಇಂಡಿಯಾ ಆಟಗಾರರು; ಎಲ್ಲೆಡೆ ಸಂಭ್ರಮಾಚರಣೆ

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ, ‘‘ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

 

Related