ಬೆಂಗಳೂರು ದಕ್ಷಿಣ: ಸತತ ರಾಜಕೀಯ ಪ್ರಯತ್ನಗಳಿಂದ ಜೆಡಿಎಸ್ ಪಕ್ಷದಲ್ಲಿ ಬೆಂಗಳೂರು ದಕ್ಷಿಣ ಅಭ್ಯರ್ಥಿ ಕಣಕ್ಕೆ ಇಳಿಯುವ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಯಾದ ಆರ್ ಪ್ರಭಾಕರ್ ರೆಡ್ಡಿ.
ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿಕೆ ಶಿವಕೂಮಾರ್, ಬೆಂಗಳೂರು ಗ್ರಾಮಂತರ ಸಂಸದ ಡಿ.ಕೆ ಸುರೇಶ್ರವರ ಸಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆರ್ ಪ್ರಭಾಕರ್ ರೆಡ್ಡಿ ಸೆರ್ಪಡೆಯಾದರು .
ಈ ಸಂದರ್ಭದಲ್ಲಿ ಮಾತನಾಡಿದ ಪ್ರಭಾಕರ್ ರೆಡ್ಡಿ ಬೆಂಗಳೂರು ಗ್ರಾಮಂತರ ಲೋಕಸಭೆ ವ್ಯಾಪ್ತಿಗೆ ಬರುವ ಎಲ್ಲ ವಿಧಾನ ಸಭಾ ಅಭ್ಯರ್ಥಿಗಳ ಪರವಾಗಿ ಪ್ರಚಾರವನ್ನು ಮಾಡುವ ಮೂಲಕ ಅಭ್ಯರ್ಥಿಗಳ ಗೆಲುವಿಗಾಗಿ ಪ್ರಮಾಣಿಕವಾಗಿ ಪ್ರಯತ್ನ ಪಡುತ್ತೇನೆ ಎಂದು ಹೇಳಿದರು.
ಹಾಗೂ ಪಕ್ಷ ಸಂಘಟನೆ ಮತ್ತು ಬಲವರ್ಧನೆಗಾಗಿ ಪ್ರತಿಯೊಂದು ಕಾರ್ಯಕರ್ತರಿಗೆ ಒಗ್ಗೂಡಿಸುವ ಮೂಲಕ ಪಕ್ಷದ ಸಮಾನ್ಯ ಕಾರ್ಯಕರ್ತನಾಗಿ ಮುಂದುವರೆಯುತ್ತೇನೆ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಧ್ಯಕ್ಷ ರಾಮಲಿಂಗ ರೆಡ್ಡಿ, ಸಂಸದ ಡಿ.ಕೆ ಸುರೇಶ್ ರವರ ನೇತೃತ್ವದಲ್ಲಿ ಪಕ್ಷದ ಎಲ್ಲ ಚುನಾವಣೆಗಳಲ್ಲಿ ಸಂಕ್ರಿಯವಾಗಿ ಭಾಗವಹಿಸುವ ಮೂಲಕ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿವಾಹಿಸುವುದಾಗಿ ತಿಳಿಸಿದರು. ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆರ್ ಕೆ ರಮೇಶ್ ರವರ ಕೈ ಬಲ ಪಡಿಸುವ ಮೂಲಕ ಈ ಬಾರಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಮತಗಳಿಂದ ಜಯಬೇರಿ ಬಾರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.