ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ. ಟಿ ದೇವೇಗೌಡ

ಪ್ರಜ್ವಲ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ. ಟಿ ದೇವೇಗೌಡ

ಬೆಂಗಳೂರು: ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ವ್ಯಸಗಿರುವ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಎಸ್ಐಟಿ ಅಧಿಕಾರಿಗಳು ಹುಡುಕಾಟದಲ್ಲಿ ತೊಡಗಿದ್ದು, ಈವರೆಗೆ ಪ್ರಜ್ವಲ್ ರೇವಣ್ಣ ಅವರು ಪತ್ತೆಯಾಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಇನ್ನು ಪ್ರಜ್ವಲ್ ರೇವಣ್ಣ ಅವರು ಕುಟುಂಬದವರ ಯಾರ ಸಂಪರ್ಕದಲ್ಲೂ ಇಲ್ಲ ಎಂಬ ಮಾಹಿತಿಯನ್ನು ಜಿಟಿ ದೇವೇಗೌಡ ಅವರು ಹೇಳಿದ್ದಾರೆ.

ನಗರದಲ್ಲಿದ್ದು ಸುದ್ದಿಗರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ.

ಅವರ ಕುಟುಂಬಸ್ಥರಿಗೂ ಅವರೆಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ, ಯಾವಾಗ ಬರುತ್ತಾರೆ ಎಂದಬುವುದು ಗೊತ್ತಿಲ್ಲ. ಅವರು ಬಂದ ಮೇಲೆಯೇ ನಮಗೆ ಸಹ ಅವರ ಬಗ್ಗೆ ಮಾಹಿತಿ ತಿಳಿಯಲಿದೆ ಎಂದರು.

ಪ್ರಜ್ವಲ್ ಮೇಲೆ ಆರೋಪ ಕೇಳಿ ಬಂದಲ್ಲಿಂದ ಪಕ್ಷದಿಂದ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಬೇಕೋ ಅನ್ನು ನಾವು ಸೂಕ್ತ ಸಮಯದಲ್ಲಿ ಮಾಡಿದ್ದೇವೆ. ಇನ್ನು ಏನಿದ್ದರೂ ಸರ್ಕಾರದ ಕೆಲಸ, ಎಸ್ ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬ್ಲೂ ಕಾರ್ನರ್ ನೊಟೀಸ್ ಜಾರಿ ಮಾಡಿದ್ದಾರೆ, ವಿಚಾರಣೆ ಮಾಡುತ್ತಾರೆ ಎಂದರು.

 

Related