ಬೆಂಗಳೂರು: ನೂರಾರು ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಜೈಲು ಅತಿಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಇದೀಗ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಜೇಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರು ಈಗಾಗಲೇ ಜಾಮೀನು ಪಡೆಯಲು ಹರ ಸಾಹಸ ಪಡುತ್ತಿದ್ದಾರೆ ಆದರೆ ಈಗ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ. ಇದನ್ನೂ ಓದಿ: ತಾಯಿ ಕಂಡು ಗಳ ಗಳನೆ ಅತ್ತ ಪ್ರಜ್ವಲ್ ರೇವಣ್ಣ..!
ಹೌದು, ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೋಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.
ಸರ್ಕಾರದ ಪರ ಎಸ್ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.