ಒಬಿಸಿ ಮೋರ್ಚಾದ ಪೂರ್ವಭಾವಿ ಸಭೆ

ಒಬಿಸಿ ಮೋರ್ಚಾದ ಪೂರ್ವಭಾವಿ ಸಭೆ

ಮದ್ದೂರು: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವುದಾಗಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಎಂ.ಸಿ. ಸಿದ್ದು ತಿಳಿಸಿದರು.

ಮದ್ದೂರು ಪಟ್ಟಣದ ಶ್ರೀಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಮದ್ದೂರು ಮಂಡಲದ ಒಬಿಸಿ ಮೋರ್ಚಾದ ಪೂರ್ವಭಾವಿ ಸಭೆ ವೇಳೆ ಮಾತನಾಡಿದ ಅವರು ತಾಲೂಕಿನಾದ್ಯಂತ ಸ್ಥಳೀಯ ಸಂಘ, ಸಂಸ್ಥೆಗಳು, ಗ್ರಾ.ಪಂ.ಗಳಲ್ಲಿ ಪಕ್ಷವು ಖಾತೆ ತೆರೆದಿದ್ದು ಮುಂದಿನ ಜಿ.ಪಂ. ಹಾಗೂ ತಾ.ಪಂ. ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಈಗಿನಿಂದಲೇ ಕಾರ್ಯಯೋಜನೆ ರೂಪಿಸಬೇಕೆಂದರು.

ಪ್ರತಿ ಗ್ರಾ.ಪಂ. ಹೋಬಳಿ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಕರೆದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಜತೆಗೆ ಭೂತ್ ಮಟ್ಟದಲ್ಲೂ ಕಾರ್ಯಕರ್ತರನ್ನು ನಿಯೋಜಿಸಿ ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಖಾತೆ ತೆರೆಯಲಿರುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

Related