ಬೆಂಗಳೂರು: ಮಳೆಗಾಲ ಪ್ರಾರಂಭವಾಗಿ ತಿಂಗಳ ಕಳೆದರೂ ರಾಜ್ಯದಲ್ಲಿ ಮುಂಗಾರು ಮಳೆ ಬಂದಿಲ್ಲ ಆದ್ದರಿಂದ ರಾಜ್ಯದ ರೈತರು ಕಂಗೆಟ್ಟಿದ್ದಾರೆ.
ರಾಜ್ಯದಲ್ಲಿ ಇನ್ನು 15 ದಿನಗಳ ಕಾಲದೊಳಗಾಗಿ ಮಳೆ ಬರದೆ ಹೋದರೆ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
ಹೌದು, ರಾಜ್ಯದಲ್ಲಿ ವರುಣದೇವ ಕೃಪೆ ತೋರದ ಹಿನ್ನಲೆಯಲ್ಲಿ ಹಾಲಿ ವರ್ಷವನ್ನು ಬರಗಾಲ ಎಂದು ಘೋಷಣೆ ಮಾಡುವ ಸಿದ್ಧತೆಯಲ್ಲಿದೆ ಎಂದು ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ ಹೇಳಿಕೆ ನೀಡಿದ್ದಾರೆ.