ಬೆಂಗಳೂರು: 2023-24 ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿ ಮಾಧ್ಯಮದರೊಂದಿಗೆ ಮಾತನಾಡಿದರು.