ಪರ ಪ್ರತಿಭಟನೆ : ಬೆಂಕಿ ಹಚ್ಚಿಕೊಂಡ ಅಭಿಮಾನಿ

ಪರ ಪ್ರತಿಭಟನೆ : ಬೆಂಕಿ ಹಚ್ಚಿಕೊಂಡ ಅಭಿಮಾನಿ

ಬೆಳಗಾವಿ : ಗೋಕಾಕ್ ನಗರದ ಬಸವೇಶ್ವರ ವೃತ್ತದಲ್ಲಿ ರಮೇಶ ಜಾರಕಿಹೊಳಿ ಬೆಂಬಲಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಮೇಶ್ ಪರ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮೇಶ್ ಜಾರಕಿಹೊಳಿ ಪರವಾಗಿ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿದ ಈ ವೇಳೆ ವ್ಯಕ್ತಿಯೋರ್ವ ಬೆಂಕಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಬೆಂಕಿಯಲ್ಲಿ ಬೀಳುತ್ತಿದ್ದಂತೆ ಕೂಡಲೇ ಧಾವಿಸಿದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದರೂ, ಸ್ವಲ್ಪ ಗಾಯಗಳಾಗಿವೆ. ನಂತರ ಈತನನ್ನು ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು.

Related