ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಕಾಂಗ್ರೆಸ್ ವಿರುದ್ದ ಪ್ರತಿಭಟನೆ

ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಕಾಂಗ್ರೆಸ್ ವಿರುದ್ದ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಈಗಾಗಲೇ ಐದು ಗ್ಯಾರಂಟಿಗಳಲ್ಲಿ ಕೆಲವೊಂದು ಜಾರಿ ಮಾಡಲಾಗಿದ್ದು ಈ ಐದು ಯೋಜನೆಗಳಿಗೆ ಹಣ ಸಾಕಾಗದಿರದ ಕಾರಣ ಎಸ್ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟಿರುವ ಹಣವನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ ಆದ್ದರಿಂದ ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಎಸ್ ಸಿ ಮೋರ್ಚಾ ವತಿಯಿಂದ ಪ್ರತಿಭಟನೆಗೆ ಮುಂದಾಗಿದ್ದಾರೆ.

ಕಾಂಗ್ರೇಸ್‌ ಪಕ್ಷ ನೀಡಿರುವ 5 ಗ್ಯಾರಂಟಿಗಳಿಗೆ ಎಸ್ಸಿ, ಎಸ್ಟಿ ವರ್ಗಗಳ ನಿಧಿ ಬಳಕೆ ವಿಚಾರವಾಗಿ ಇಂದು ಆಗಸ್ಟ್.4 ಶುಕ್ರವಾರ ರಂದು ಸರ್ಕಾರದ ವಿರುದ್ಧ ಬೆಳಗ್ಗೆ 11 ಗಂಟೆಗೆ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿಆಡಳಿತ ಪಕ್ಷದ ವಿರುದ್ದ ಘೋಷಣೆಗಳ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ, ಮತ್ತು ಬೆಂಗಳೂರು ಬಿಜೆಪಿ ಜನಪ್ರತಿನಿಧಿಗಳು ಭಾಗಿಯಾಗಿ ಪ್ರತಿಭಟನೆ ನಡೆಸಿದರು.

(ವರದಿಗಾರ: ಎ.ಚಿದಾನಂದ)

Related