ಹುಬ್ಬಳ್ಳಿಯಲ್ಲಿ ಶಕ್ತಿ ಯೋಜನೆ ವಿರುದ್ಧ ಪ್ರತಿಭಟನೆ

  • In State
  • July 31, 2023
  • 260 Views
ಹುಬ್ಬಳ್ಳಿಯಲ್ಲಿ ಶಕ್ತಿ ಯೋಜನೆ ವಿರುದ್ಧ ಪ್ರತಿಭಟನೆ

ಧಾರವಾಡ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಪಯೋಗವಾಗುತಿದೆ. ಆದರೆ ರಾಜ್ಯದಲ್ಲಿರುವಂತಹ ಆಟೋ ಚಾಲಕರಿಗೆ ಶಕ್ತಿ ಯೋಜನೆಯಿಂದ ಬಹಳ ತೊಂದರೆಯಾಗುತ್ತಿದೆ ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು ಕೈಬಿಡಬೇಕೆಂದು ಹುಬ್ಬಳ್ಳಿಯಲ್ಲಿ

ಮಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ  ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರು ಖುಷಿಯಾಗಿದ್ದಾರೆ. ಆದರೆ, ಆಟೋ ಚಾಲಕರು ಕಷ್ಟಪಡುವ ಸ್ಥಿತಿ ಬಂದಿದೆ. ಅವರ ವಾದವೆಂದರೆ, ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಅವರ ಬದುಕು ದುಸ್ತರಗೊಂಡಿದೆ.

ಬಸ್ ಪ್ರಯಾಣ ಉಚಿತವಾಗಿರುವುದರಿಂದ ಮಹಿಳೆಯರು ಈಗ ಆಟೋಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟಿದ್ದಾರೆ. ಹುಬ್ಬಳ್ಳಿ-ಧಾರವಾಡದ ಉತ್ತರ ಕರ್ನಾಟಕ ಆಟೋ ಚಾಲಕರ ಸಂಘದ ಸದಸ್ಯರು ಇಂದು ಬೆಳಗ್ಗೆ ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಶಕ್ತಿಯೋಜನೆ ಕೈಬಿಡಲೇಬೇಕು ಅಂತ ಘೋಷಣೆ ಕೂಗಿದ ಅವರು ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ ಅಂತ ಹೇಳಿದರು.

Related