ಕಾಂಗ್ರೆಸ್‍ನಿಂದ ಪ್ರತಿಭಟನೆ

ಕಾಂಗ್ರೆಸ್‍ನಿಂದ ಪ್ರತಿಭಟನೆ

ಗಜೇಂದ್ರಗಡ : ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ  ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮೇಲೆ ಪೋಲೀಸರು ಹಲ್ಲೆ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶ   ಸರ್ಕಾರ  ಹಾಗೂ ಪೊಲೀಸರ ಕ್ರಮ ಖಂಡಿಸಿ, ಡಿ.ಕೆ.ಶಿವಕುಮಾರ ಅಭಿಮಾನಿ ಬಳಗದಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ  ಕಾಂಗ್ರೆಸ್ ಮುಖಂಡ ಅಪ್ಪು ಮತ್ತಿಕಟ್ಟಿ ಮಾತನಾಡಿ, ಉ.ಪ್ರದೇಶದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಸಂತ್ರಸ್ತೆಯ ಪೋಷಕರಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಉತ್ತರಪ್ರದೇಶ ಪೊಲೀಸರ ನಡುವೆ ಹೊಯ್ ಕೈ ನಡೆದಿತ್ತು.

ಕಾಂಗ್ರೆಸ್ ಮುಖಂಡ ಬಸವರಾಜ ಬಂಕದ ಮಾತನಾಡಿದ ಅವರು, ಬಿಜೆಪಿ ಸರ್ಕಾರಕ್ಕೆ  ಕೇವಲ ದಲಿತರ ಓಟುಗಳು ಮಾತ್ರ ಬೇಕು ದಲಿತರಿಗೆ ಅನ್ಯಾಯ, ಅತ್ಯಾಚಾರವಾದರೆ ಯಾರೊಬ್ಬ ಬಿಜೆಪಿ ನಾಯಕರು ಕೂಡಾ ಧ್ವನಿ ಎತ್ತುತ್ತಿಲ್ಲ ಏಕೆ? ಎಲ್ಲಿಯಾದರೂ ಬಿಜೆಪಿ ನಾಯಕರು ಇದರ ಬಗ್ಗೆ ತಾಕತ್ ಇದ್ದರೆ ಧ್ವನಿ ಎತ್ತಲಿ ಇದು ನನ್ನ ಚಾಲೇಜ್ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಈ ವೇಳೆ ನಡೆದ ಲಾಠಿಚರ‍್ಜ್ ಮತ್ತು ತಳ್ಳಾಟದಿಂದಾಗಿ ರಾಹುಲ್ ಗಾಂಧಿ ಮುಗ್ಗರಿಸಿ ಬಿದ್ದಿದ್ದರು ಘಟನೆಯನ್ನು ರಾಜ್ಯ ಕಾಂಗ್ರೆಸ್ ಖಂಡಿಸುತ್ತೇವೆ ಎಂದರು.

Related