ಪರಿಹಾರ ಬಿಡುಗಡೆಗೆ ಪ್ರತಿಭಟನೆ

ಪರಿಹಾರ ಬಿಡುಗಡೆಗೆ ಪ್ರತಿಭಟನೆ

ಹುಬ್ಬಳ್ಳಿ : ಲಾಕ್‍ಡೌನ್‍ನಿಂದ  ಸಂಕಷ್ಟಕ್ಕೊಳಗಾದ ಆಟೊ, ಟ್ಯಾಕ್ಸಿ ಚಾಲಕರಿಗೆ ಸರ್ಕಾರ ಘೋಷಿಸಿದ 5ಸಾವಿರ ಪರಿಹಾರ ಇನ್ನೂ ತಲುಪಿಲ್ಲ. ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆಟೊ ರಿಕ್ಷಾ ಮಾಲೀಕರ, ಚಾಲಕರ ಸಂಘದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅವರು ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್’ಗೆ ಮನವಿ ಸಲ್ಲಿಸಿದರು.

ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್’ನಿಂದ ಜೂನ್’ವರೆಗೆ ದುಡಿಮೆಯಿಲ್ಲದೆ ಸಂಕಷ್ಟದ ಪರಿಸ್ಥಿತಿ ಎದುರಿಸಿದ್ದೇವೆ, ಸರ್ಕಾರಕ್ಕೆ ಮಾರ್ಸೂಚಿಯಂತೆ ಅರ್ಜಿ ಸಲ್ಲಿಸಿದ್ದರೂ, ಕೇವಲ ಶೇ 10 ರಷ್ಟು ಮಂದಿಗೆ ಮಾತ್ರ ಪರಿಹಾರ ದೊರಕಿದೆ. ಉಳಿದವರಿಗೆ ಇನ್ನೂ ಪರಿಹಾರ ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ ಎಲ್ಲ ಅರ್ಹರಿಗೂ ಏಕಕಾಲದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಒತ್ತಾಯಿಸಿದರು.

Related