ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ…!

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ…!

ಸುರಪುರ : ಕೋವಿಡ್ ಮುಂಜಾಗ್ರತೆ ಹಿನ್ನೆಲೆ ನಗರಸಭೆಯವರು ತರಕಾರಿ ವ್ಯಾಪಾರ ಮಾಡಲು, ವ್ಯಾಪಾರಸ್ಥರಿಗೆ ಎಸ್ ಪಿ ಕಾಲೇಜು ಆವರಣದಲ್ಲಿ ಅನುಕೂಲ ಮಾಡಲು ಸಿದ್ಧತೆ ಮಾಡಿದ್ದು, ಇದನ್ನು ವಿರೋಧಿಸಿ ಯಾದಗಿರಿ ಜಿಲ್ಲೆಯ ಸುರಪುರ ನಗರಸಭೆ ಕಚೇರಿ ಮುಂದೆ ಬೀದಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.

ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಸ್ಥರು ನಾವು ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತೇವೆ. ನಮಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

ಮಾಸ್ಕ್ ಹಾಕಿಕೊಳ್ಳದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಕೋವಿಡ್ ನಿಯಮ ಉಲ್ಲಂಘಿಸಿ ವ್ಯಾಪಾರಸ್ಥರು ಪ್ರತಿಭಟನೆ ಮಾಡಿದರು.

Related