ಪಿಎಸ್ಐ ಅಮಾನತು

ಪಿಎಸ್ಐ ಅಮಾನತು

ತುಮಕೂರು, ಫೆ. 13 : ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ರಾಘವೇಂದ್ರ ಅವರನ್ನು ಅಮಾನತುಗೊಳಿಸಿ ಎಸ್ಪಿ ಕೋನವಂಶಿಕೃಷ್ಣ ಅವರು ಆದೇಶಿಸಿದ್ದಾರೆ.
ಮೇಲಾಧಿಕಾರಿಗಳ ಗಮನಕ್ಕೂ ತರದೆ ಪಿಎಸ್ಐ ರಾಘವೇಂದ್ರ ಅವರು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಎಸ್ಪಿ ಕೋನವಂಶಿಕೃಷ್ಣ ಅವರು ಪರಿಶೀಲನೆ ನಡೆಸಿದಾಗ ಕರ್ತವ್ಯದಲ್ಲಿ ನಿರ್ಲಕ್ಷ್ಯ ಹಾಗೂ ಬೇಜಾಬ್ದಾರಿತನದಿಂದ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಪಿಎಸ್ಐ ರಾಘವೇಂದ್ರ ಅವರ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Related