ಬೆಂಗಳೂರು : ಪ್ರಮಾಣವಚನ ಸ್ವೀಕಾರ ಮಾಡಲಿರುವವರ 7 ಶಾಸಕರ ಹೆಸರುಗಳನ್ನು ಮಧ್ಯಾಹ್ನ 3.50ಕ್ಕೆ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಸಂಪುಟವನ್ನು ಸೇರುವವರು ಯಾರು ಎಂಬ ಕುತೂಹಲವನ್ನು ತಣಿಸಿದ್ದಾರೆ.
ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಮಹದೇವಪುರ ಶಾಸಕ ಅರವಿಂದ್ ಲಿಂಬಾವಲಿ, ಸುಳ್ಯ ಶಾಸಕ ಎಸ್. ಅಂಗಾರ, ಬೀಳಗಿ ಶಾಸಕ ಮುರುಗೇಶ್ ನಿರಾಣಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ ಅವರ ಹೆಸರುಗಳಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ ಪ್ರಕಟಿಸಿದ್ದಾರೆ.