ಪಿಯುಸಿ ಪರೀಕ್ಷೆ ಮುಂದೂಡಿಕೆ..!

ಪಿಯುಸಿ ಪರೀಕ್ಷೆ ಮುಂದೂಡಿಕೆ..!

ಬೆಂಗಳೂರು, ಮಾ. 23 : ಕೊರೋನಾ ಸೋಂಕು ತಡೆಗಟ್ಟಲು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಹಿನ್ನೆಲೆ ಸೋಮವಾರ ನಡೆಯ ನಡೆಯಬೇಕಿದ್ದ ಕೊನೆಯ ಪಿಯುಸಿ ಪರೀಕ್ಷೆ ಮುಂದೂಡಲಾಗಿದೆ.
ನಾಳೆ ಪಿಯುಸಿಯ ಕೊನೆಯ ಇಂಗ್ಲೀಷ್ ಪರೀಕ್ಷೆ ನಡೆಯಬೇಕಿತ್ತು. ಆದರೆ, ಒಂಬತ್ತು ಜಿಲ್ಲೆಗಳಲ್ಲಿ ಎಲ್ಲಾ ಸೇವೆಗಳನ್ನು ಬಂದ್ ಮಾಡಿರುವ ಕಾರಣ, ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮಾ.31ರ ನಂತರ ಬಾಕಿ ಇರುವ ಇಂಗ್ಲೀಷ್ ಪರೀಕ್ಷೆಯ ದಿನಾಂಕ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.
ಈ ಮೊದಲು ರಾಜ್ಯಾದಾದ್ಯಂತ ಸಾರಿಗೆ ಬಸ್ ಬಂದ್ ಆಗಲಿದ್ದು, ಸೋಮವಾರ ನಡೆಯುವ ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದರು.
ಹೀಗೆ ಸಚಿವರ ಗೊಂದಲದ ಹೇಳಿಕೆಯಿಂದಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ತೀವ್ರ ಗೊಂದಲ ಸೃಷ್ಟಿಸಿತ್ತು.ಕೊನೆಗೆ ಎಚ್ಚೆತ್ತುಗೊಂಡ ಸರ್ಕಾರ ನಾಳೆ ಪರೀಕ್ಷೆ ಮುಂದೂಡಿಕೆಯಾಗಿರುವುದನ್ನು ಸ್ಪಷ್ಟಪಡಿಸಿದೆ. ಬೆಳಗ್ಗೆಯಷ್ಟೇ ಎಸ್ ,ಎಸ್,ಎಲ್ ಸಿ ಪರೀಕ್ಷೆ ಮುಂದೂಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿತ್ತು.

Related