ನವೆಂಬರ್ 1ಕ್ಕೆ ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

  • In State
  • August 5, 2022
  • 179 Views
ನವೆಂಬರ್ 1ಕ್ಕೆ ಪುನೀತ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು ಆ5: ಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆದ ಫಲ ಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಅಪ್ಪುಗೆ ಘೋಷಣೆ ಮಾಡಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಇಡೀ ಕುಟುಂಬ ಹಾಜರಿತ್ತು.

ಇಂದು ಉದ್ಘಾಟನೆಗೊಂಡ ಫಲ ಪುಷ್ಪ ಪ್ರದರ್ಶನದಲ್ಲಿ ಡಾ.ರಾಜ್ ಕುಮಾರ್ ಮತ್ತು ಅಪ್ಪು ನೆನಪಿನಲ್ಲಿ ವಿಶೇಷ ಪ್ರದರ್ಶನ ಆಯೋಜನೆಗೊಂಡಿದೆ. ಪುನೀತ್ ಮತ್ತು ಡಾ.ರಾಜ್ ಪುತ್ಥಳಿಗಳನ್ನು ಲಾಲ್ ಬಾಗ್ ನಲ್ಲಿ ಪ್ರತಿಷ್ಠಾಪಿಸಲಾಗಿದೆ. ಈ ಮೂಲಕ ಮೇರು ನಟರಿಗೆ ಸರಕಾರವು ಗೌರವ ಸಲ್ಲಿಸಿದೆ. ಇಂದಿನಿಂದ ಹತ್ತು ದಿನಗಳ ಕಾಲ ನಡೆಯುವ ಈ ಪ್ರದರ್ಶನದಲ್ಲಿ ನೆಚ್ಚಿನ ನಟರ ವಿವಿಧ ಕಲಾಕೃತಿಗಳನ್ನೂ ಅಲ್ಲಿ ನೋಡಬಹುದಾಗಿದೆ.

 

 

Related