ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ನಡೆಯುತ್ತಿದ್ದು ಇಂದು ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಇನ್ನಿತರರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಈ ಕುರಿತು ಇಂದು ಪುತ್ತೂರಿನಲ್ಲಿ ಮಹತ್ವದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಪುತ್ತಿಲ ಪರಿವಾರ ಸದಸ್ಯರು ಎಲ್ಲರೂ ಬಿಜೆಪಿ ಸೇರ್ತಾರೆ ಎಂದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ಪುತ್ತಿಲ ಪರಿವಾರದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಪುತ್ತಿಲ ಪರಿವಾರದ ಹಲವು ಮುಖಂಡರು ಭಾಗಿಯಾಗಲಿದ್ದು, ಈ ಸಭೆಯಲ್ಲಿ ಪುತ್ತಿಲ ಪರಿವಾರ ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಮಾಡಲಿದೆ.
ಈಗಾಗಲೇ ಪುತ್ತಿಲ ಪರಿವಾರದಲ್ಲೇ ಬಿಜೆಪಿ ಸೇರ್ಪಡೆಗೆ ಅಪಸ್ವರ ಎದ್ದಿದ್ದು, ಪುತ್ತಿಲ ಪರಿವಾರದ ಒಂದು ಬಣ ಬಿಜೆಪಿ ಸೇರ್ಪಡೆಗೆ ಒಮ್ಮತ ವ್ಯಕ್ತಪಡಿಸಿದರೆ, ಇನ್ನೊಂದು ಬಣ ಬಿಜೆಪಿ ಸೇರ್ಪಡೆಗೆ ಸುತರಾಂ ಒಪ್ಪುತ್ತಿಲ್ಲ. ಹೀಗಾಗಿ ಈ ಗೊಂದಲ ಪುತ್ತಿಲ ಪರಿವಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ.
ಹೀಗಾಗಿ ಇಂದು ಮಧ್ಯಾಹ್ನ 3 ಗಂಟೆಗೆ ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ನಡೆಯಲಿರುವ ಪುತ್ತಿಲ ಪರಿವಾರದ ಸಭೆಯಲ್ಲಿ ಬಿಜೆಪಿ ಸೇರುವುದೋ, ಅಥವಾ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದೋ ಎಂಬ ವಿಚಾರವೂ ಚರ್ಚೆಗೆ ಬರುವ ಸಾಧ್ಯತೆ ಇದೆ.