ಮಡಿಕೇರಿ, ಫೆ. 12 : ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಮನೆಯ ಬೀಗ ಮುರಿದು ಕಳವು ಮಾಡಿದ್ದ ಖತರ್ನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸತೀಶ್ (32), ಕಿರಣ್ (23) ಚಂದ್ರಶೇಖರ್.ಕೆ (23) ಎಂದು ಗುರುತಿಸಲಾಗಿದೆ. 3,64,800 ರೂ. ಮೌಲ್ಯದ 96 ಗ್ರಾಂ ಚಿನ್ನಾಭರಣ, 128 ಗ್ರಾಂ ತೂಕದ ಬೆಳ್ಳಿ, 1 ಮೊಬೈಲ್,ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಸ್ಪ್ಲೆಂಡರ್ ಬೈಕ್ ,ಮನೆ ಬೀಗ ಒಡೆಯಲು ಬಳಸಿದ್ದ 2 ಕಬ್ಬಿಣದ ರಾಡ್ನ್ನು ವಶಪಡಿಸಿಕೊಳ್ಳಲಾಗಿದೆ.