ಕೇಂದ್ರ ಸರ್ಕಾರದ ವಿರುದ್ಧ ರಾಗಾ ಕಿಡಿ

ಕೇಂದ್ರ ಸರ್ಕಾರದ ವಿರುದ್ಧ ರಾಗಾ ಕಿಡಿ

ನವದೆಹಲಿ : ಸೆಪ್ಟೆಂಬರ್‌ನಲ್ಲಿ ಅಂಗೀಕರಿಸಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬುಧವಾರ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧೀ ಸರ್ಕಾರ ಏನು ಹೇಳಿದೆ. ರೈತರ ಆದಾಯ ದ್ವಿಗುಣಗೊಳ್ಳುತ್ತದೆ ಸರ್ಕಾರ ಏನು ಮಾಡಿದೆ ಅದರ ಗೆಳೆಯರ ಆದಾಯವನ್ನು ನಾಲ್ಕು ಪಟ್ಟು ಹೆಚ್ಚಿಸಿದೆ ಮತ್ತು ರೈತರ ಆದಾಯವನ್ನು ಅರ್ಧಕ್ಕೆ ಇಳಿಸುತ್ತದೆ. ಇದು ಸುಳ್ಳಿನ ಸರ್ಕಾರ ಮತ್ತು ‘ಸೂಟ್-ಬೂಟ್’ ಸರ್ಕಾರ ಎಂದು ರಾಹುಲ್ ಗಾಂಧಿ ಹೇಳಿದರು.

ರೈತರ ಕಠಿಣ ಪರಿಶ್ರಮ ನಮ್ಮೆಲ್ಲರ ಸಾಲವಾಗಿದೆ. ಈ ಸಾಲವನ್ನು ಅವರಿಗೆ ನ್ಯಾಯ ಒದಗಿಸುವುದರ ಮೂಲಕ ಮಾತ್ರ ಪಾವತಿಸಬಹುದಾಗಿದೆ. ನಿಮ್ಮ ಅಹಂಕಾರವನ್ನು ಬದಿಗಿಟ್ಟು ರೈತನಿಗೆ ಅರ್ಹವಾದದ್ದನ್ನು ನೀಡಿ ‘ಎಂದು ಟ್ವೀಟ್ ಮಾಡಿದ್ದಾರೆ.

Related