ಬೀದರ್: ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮುಸ್ಲಿಂ ಸಮುದಾಯದ ರಹೀಂ ಖಾನ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆ ಆಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಪ್ರಬಲ ನಾಯಕರಾಗಿದ್ದ ರಹೀಂ ಖಾನ್ ಅವರು ಮಂತ್ರಿ ಗಿರಿಯನ್ನು ಗಿಟ್ಟಿಸಿಕೊಂಡಿದ್ದು ಅವರಿಗೆ ಪೌರಾಡಳಿತ ಇಲಾಖೆ ಒಲಿದು ಬಂದಿದೆ.