ಕೋಲಾರದಲ್ಲಿ ರಾಹುಲ್ ಗಾಂಧಿ ಅಬ್ಬರ

ಕೋಲಾರದಲ್ಲಿ ರಾಹುಲ್ ಗಾಂಧಿ ಅಬ್ಬರ

ಕೋಲಾರ: ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಇಂದು ಬುಧವಾರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿದ್ದು, ಮೊದಲು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದು ಇದೀಗ ಮತ್ತೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಬೇಟೆಯಲ್ಲಿ ತೊಡಗಿದ್ದಾರೆ.

ಬೃಹತ್ ಕಾಂಗ್ರೆಸ್ನ ಸಮಾವೇಶ ಜರುಗಿದ್ದು, ಈ ಸಮಾವೇಶದಲ್ಲಿ ಮುನಿಸಿಕೊಂಡ ಕಾಂಗ್ರೆಸ್ ನಾಯಕರುಗಳನ್ನು ಒಂದೇ ವೇದಿಕೆಯಲ್ಲಿ ಹಾಜರಾಗಿರುವುದು ವಿಶೇಷವಾಗಿದೆ

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಮುನಿಯಪ್ಪ ನಡುವೆ ಬಣ ಬಡಿದಾಟ ನಡೆದಿದೆ. ಆದ್ರೆ, ಎಲ್ಲಾ ಅಸಮಾಧಾನ ಬಿಟ್ಟು ಇಂದಿನ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ, ಮುನಿಸಿಕೊಂಡಿದ್ದ ಸಚಿವ ಹೆಎಚ್​ ಮುನಿಯಪ್ಪ, ಅವರ ಪುತ್ರಿ ರೂಪಾ ಶಶಿಧರ್ ಸೇರಿದಂತೆ ಹಲವರು ಹಾಜರಾಗಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಈ ಕಾರ್ಯಕ್ರಮ ಮುನಿಸಿಕೊಂಡ ನಾಯಕರನ್ನು ಒಂದೇ ವೇದಿಕೆಗೆ ಹತ್ತಿಸಿದೆ.

Related