ಬೆಂಗಳೂರಿಗೆ ಬಂದಿಳಿದ ರಾಹುಲ್ ಗಾಂಧಿ

ಬೆಂಗಳೂರಿಗೆ ಬಂದಿಳಿದ ರಾಹುಲ್ ಗಾಂಧಿ

ಬೆಂಗಳೂರು: ಚುನಾವಣೆ ಪ್ರಚಾರ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಬಿಜೆಪಿ ಸರಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಕರ್ನಾಟಕ ಬಿಜೆಪಿ ಪಕ್ಷ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 7) ರಂದು ರಾಹುಲ್ ಗಾಂಧಿಯವರು ಬೆಂಗಳೂರು ಕೋರ್ಟಿಗೆ ಹಾಜರಾಗಬೇಕೆಂದು ಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಭವಾನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ಅದರಂತೆ ಇಂದು ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೆಹಲಿಯಿಂದ ಬಂದಿಳಿದರು.

ಇನ್ನು ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

 

Related