ಮೋದಿ ಉಪನಾಮ ಕುರಿತು ರಾಹುಲ್ ಅವಹೇಳನ ಶಿಕ್ಷೆ ಪ್ರಕಟ: ತಡೆಯಾಜ್ಞೆ ಅರ್ಜಿ ತಿರಸ್ಕಾರ

ಮೋದಿ ಉಪನಾಮ ಕುರಿತು ರಾಹುಲ್ ಅವಹೇಳನ ಶಿಕ್ಷೆ ಪ್ರಕಟ: ತಡೆಯಾಜ್ಞೆ ಅರ್ಜಿ ತಿರಸ್ಕಾರ

ಬೆಂಗಳೂರು: ಮೋದಿ ಉಪನಾಮ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ’ ಎಂದು ಹೇಳಿದ್ದಕ್ಕೆ ಶಿಕ್ಷೆಗೆ ಒಳಗಾಗಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ರಾಹುಲ್ ಗಾಂಧಿ ಅವರಿಗೆ ಸಂಸತ್ ಸದಸ್ಯನ ಅನರ್ಹತೆಯನ್ನು ಮುಂದುರೆಸಿದೆ.

ಕಳೆದ ಲೋಕಸಭಾ ಚುನಾವಣೆ ವೇಳೆ ‘ಮೋದಿ ಉಪನಾಮ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ’ ಎಂದು ರಾಹುಲ್ಗಾಂಧಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಧೀಶರು ಮಾ.23ರಂದು ರಾಹುಲ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದರು. ಇದರಿಂದ ಸಂಸತ್ ಸದಸ್ಯ ಸ್ಥಾನವೂ ರದ್ದಾಗಿತ್ತು. ಈಗ ಹೈಕೋರ್ಟ್ನಲ್ಲಿ ಶಿಕ್ಷೆಗೆ ತಡೆ ನೀಡಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ವಿಸ್ತೃತ ಪೀಠಕ್ಕೆ ಅರ್ಜಿ ಸಲ್ಲಿಸುವ ಅವಕಾಶ ಇದೆ.

ಪ್ರಕರಣದ ಹಿನ್ನೆಲೆ: ಕೋಲಾರದಲ್ಲಿ 2019ರಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ ರಾಹುಲ್ ಗಾಂಧಿಮೋದಿಯವರ ಉಪನಾಮ ಕುರಿತು ಈ ಹೇಳಿಕೆ ನೀಡಿದ್ದರು. ಹೇಳಿಕೆ ವಿರುದ್ಧ ಗುಜರಾತ್ನ ಸೂರತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅಲ್ಲಿನ ಕೋರ್ಟ್ನಲ್ಲಿ ರಾಹುಲ್ ವಿರುದ್ಧ ಕೇಸ್ ಹಾಕಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರ ಸಂಸತ್ ಸದಸ್ಯತ್ವ ಅನರ್ಹಗೊಂಡಿತ್ತು.

ವರದಿ

ಎಲ್.ಮಂಜುನಾಥ

Related