ಬೆಂಗಳೂರಿನಲ್ಲಿ ತಂಪೆರದ ಮಳೆರಾಯ

ಬೆಂಗಳೂರಿನಲ್ಲಿ ತಂಪೆರದ ಮಳೆರಾಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಈ ವರ್ಷ ಬೇಸಿಗೆಯ ಬಿಸಿಲು ಹೆಚ್ಚಾಗಿದ್ದು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ.

ಇಂದು ಬೆಂಗಳೂರಿನ ಹಲವು ಕಡೆಗಳಲ್ಲಿ ವರುಣ ತಂಪೆರೆದಿದ್ದಾನೆ. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನರಿಗೆ ವರುಣನ ಆಗಮನದಿಂದ ಬೆಂಗಳೂರು ಜನರ ಮೊಗದಲ್ಲಿ ಸಂತಸ ಉಂಟಾಗಿದೆ.

ಬೆಂಗಳೂರಿನ ಸುತ್ತಮುತ್ತಲಿನಲ್ಲಿ ಗಾಳಿ ಸಮೇತ ಮಳೆಯಾಗುತ್ತಿತ್ತು ಅಲ್ಲಲ್ಲಿ ಟ್ರಾಫಿಕ್ ಜಾಮ್ ಆಗುವ ಮುನ್ಸೂಚನೆ ಕಂಡುಬಂದಿದೆ.

ಬೆಂಗಳೂರು ನಗರದ ಹಲವೆಡೆ ಮಳೆ ಆಗಿದೆ. ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಇಂದಿರಾ ನಗರ ಹೆಬ್ಬಾಳ ಸೇರಿದಂತೆ ಬೆಂಗಳೂರು ನಗರದಲ್ಲಿ ಹಲವೆಡೆ ಮಳೆಯಾಗಿದ್ದು ಕಂಡುಬಂದಿದೆ.

 

Related