ರಾಮಮಂದಿರ ನಿರ್ಮಾಣಕ್ಕೆ ರತ್ನಪ್ರಭಾ ದೇಣಿಗೆ

ರಾಮಮಂದಿರ ನಿರ್ಮಾಣಕ್ಕೆ ರತ್ನಪ್ರಭಾ ದೇಣಿಗೆ

ಬೆಂಗಳೂರು: ಅಯೋಧ್ಯೆಯ ರಾಮಜನ್ಮ ಭೂಮಿ ನಿರ್ಮಾಣ ಸಂಬಂಧ ರಾಜ್ಯ ಕೌಶಾಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಾಪ್ರಭಾ ರಾಮಮಂದಿರ ನಿರ್ಮಾಣಕ್ಕಾಗಿ ಚೆಕ್ ಮೂಲಕ 1o ಸಾವಿರ ರೂ.ಗಳನ್ನು ದೇಣಿಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ವರ್ಷದಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ದೇಶದಲ್ಲಿರುವ ಹಿಂದುಗಳೆಲ್ಲಾ ಕಾಯುತ್ತಿದ್ದೇವೆ. ಈ ಸಂದರ್ಭದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ತಮ್ಮದೇ ಆದಂತಹ ಹಲವು ಸೇವೆಯನ್ನು ದೇಣಿಗೆ ನೀಡುವ ಮೂಲಕ ರಾಮಮಂದಿರ ನಿರ್ಮಾಣದಲ್ಲಿ ಹಿಂದೂ ಆಗಿ ಹಾಗೂ ಭಾರತ ದೇಶದ ಪ್ರತಿನಿಧಿಯಾಗಿ ಈ ದೇಣಿಗೆ ನೀಡಲಾಗುತ್ತಿದೆ ಎಂದರು.

ಬಿಜೆಪಿ ಹಾಗೂ ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ ಸುಭೀಕ್ಷೆಗಾಗಿ ರಾಮ ರಾಜ್ಯವನ್ನಾಗಿ ಆಡಳಿತ ನಡೆಸುತ್ತಿದ್ದಾರೆ. ಈಗ ಪ್ರಧಾನಿ ಮೋದಿ ಆಡಳಿತದಲ್ಲಿ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತದಿಂದ ಜನರು ನೆಮ್ಮದಿಯಾಗಿದ್ದಾರೆ. ಹಾಗಾಗಿ ರಾಮಮಂದಿರ ನಿರ್ಮಾಣ ನಮಗೆ ಅಗತ್ಯ ಇದೆ. ಹಿಂದೂಗಳ ಭಾವೈಕ್ಯತೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಎಲ್ಲರಿಗೂ ಒಳ್ಳೆಯದಾಗಲಿದೆ ಎಂದು ತಿಳಿಸಿದರು.

Related