ಆರ್‌ಸಿಬಿ ಗೆಲುವಿನ ನಗೆ ಬೀರಲು ಸಜ್ಜು..!

ಆರ್‌ಸಿಬಿ ಗೆಲುವಿನ ನಗೆ ಬೀರಲು ಸಜ್ಜು..!

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಮುಖಿಯಾಗಲಿದೆ.

ಶುಕ್ರವಾರ ನಡೆದ ಮೊದಲನೆಯ ಪಂದ್ಯದಲ್ಲಿ ಆರ್‌ಸಿಬಿ ಸೋಲನ್ನು ಅನುಭವಿಸಿರುವುದರಿಂದ ಆರ್ ಸಿ ಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಲು ಮುಂದಾಗಿದೆ.

ಇನ್ನು ಆರ್‌ಸಿಬಿ ತಂಡದ ನಾಯಕನಾಗಿರುವ ನಾಯಕ ಫಾಫ್ ಡು ಪ್ಲೆಸಿಸ್, ಎಂ ಚಿನ್ನಸ್ವಾಮಿ ಕ್ರೀಡಾಂಗಣ ‘ಬ್ಯಾಟಿಂಗ್ ಮಾಡಲು ಉತ್ತಮ ಸ್ಥಳ’ವಾಗಿದೆ ಎಂದಿದ್ದಾರೆ.

ಆರ್‌ಸಿಬಿಯಿಂದ ಗೇಮ್ ಡೇ ಹೊಸ ಸಂಚಿಕೆಯಲ್ಲಿ ಮಾತನಾಡಿದ ಅವರು, ಮುಂಬರುವ ಪಂದ್ಯದಲ್ಲಿ ಭಾಗವಹಿಸಲು ತಮ್ಮ ತಂಡ ಸಿದ್ಧವಾಗಿದೆ. ಮೊದಲ ಪಂದ್ಯ ಚೆನ್ನೈನಲ್ಲಿತ್ತು ಮತ್ತು ಅಲ್ಲಿ ದೊಡ್ಡ ಸಂಖ್ಯೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳು ನೆರೆದಿದ್ದರು. ಇದೀಗ, ಮತ್ತೆ ಇಲ್ಲಿ ಬ್ಯಾಟಿಂಗ್ ಮಾಡಲು ಎದುರು ನೋಡುತ್ತಿದ್ದೇನೆ. ಬೆಂಗಳೂರಿನ ಪಿಚ್ ಬ್ಯಾಟಿಂಗ್ ಮಾಡಲು ಉತ್ತಮ ಸ್ಥಳವಾಗಿದೆ ಎಂದರು.

ಆಸ್ಟ್ರೇಲಿಯಾದ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ ಕೂಡ ಮಾತನಾಡಿದ್ದು, ಬೆಂಗಳೂರಿನ ಪಿಚ್ ಬ್ಯಾಟಿಂಗ್‌ಗೆ ‘ಸುಂದರವಾಗಿದೆ’. ಔಟ್‌ಫೀಲ್ಡ್ ಕೂಡ ತ್ವರಿತವಾಗಿದೆ ಎಂದು ಅವರು ಹೇಳಿದರು.

Related