ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ: ಆರಗ ಜ್ಞಾನೇಂದ್ರ.

ಅಗ್ನಿಶಾಮಕ ದಳದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ: ಆರಗ ಜ್ಞಾನೇಂದ್ರ.

ಬೆಂಗಳೂರು, ಜುಲೈ 16 : ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿರುವ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾಗಿ, ನೇಮಕಾತಿ ನಿರೀಕ್ಷೆಯಲ್ಲಿದ್ದ, ಅಭ್ಯರ್ಥಿಗಳಿಗೆ, ನೇಮಕಾತಿ ಪತ್ರ ವಿತರಿಸಲು, ರಾಜ್ಯ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ನಿರ್ದೇಶನ ನೀಡಿದ್ದಾರೆ.
ಈ ಬಗ್ಗೆ, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯು ಕ್ರಮ ಕೈಗೊಂಡಿದ್ದು, ಇದುವರೆಗೆ ಒಟ್ಟು ೬೦೭ ಅಭ್ಯರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ.

ಇನ್ನುಳಿದ ಅಭ್ಯರ್ಥಿಗಳ ಆಯ್ಕೆ ಸಿಂಧುತ್ವವನ್ನೂ ಪಡೆದಿದ್ದು, ನೇಮಕಾತಿ ಆದೇಶ ನೀಡುವ ಪ್ರಕ್ರಿಯೆ ನಡೆಯುತ್ತಿದೆ, ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯ ಸರಕಾರವು, ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಆದ್ಯತೆ ಮೇರೆಗೆ ಸ್ಥಾಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ, ಹುದ್ದೆಗಳ ಭರ್ತಿಗೆ ಸಹ ಕ್ರಮ ಕೈಗೊಂಡಿದೆ.

ಇಲಾಖೆಯಲ್ಲಿ ಒಟ್ಟು ೭೦೫೭ ವಿವಿಧ ಶ್ರೇಣಿಯ ಹುದ್ದೆಗಳಿದ್ದು, ೨೦೨೧ ನೇ ವರ್ಷದ ಅಂತ್ಯಕ್ಕೆ, ಸುಮಾರು ೨೬೨೭ ಹುದ್ದೆ ಗಳು ಖಾಲಿಯಿದ್ದು, ಪ್ರಸ್ತುತ ವರ್ಷ ೧೫೬೭ ಹುದ್ದೆಗಳನ್ನು ಭರ್ತಿ ಮಾಡ ಲಾಗುತ್ತಿದೆ.

ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಗ್ನಿಶಾಮಕ ಠಾಣೆ ಗಳ ಸ್ಥಾಪನೆಗೆ, ಸರಕಾರ ವಿಶೇಷ ಕ್ರಮ ಕೈಗೊಂಡು, ನೂತನ ಕಟ್ಟಡಗಳೂ ಹಾಗೂ ಇನ್ನಿತರ ಸೌಲಭ್ಯ ಗಳನ್ನು ಒದಗಿಸಲಾಗುತ್ತಿದೆ, ಎಂದು ಸಚಿವರು, ತಿಳಿಸಿದ್ದಾರೆ.

Related