ಸದ್ಯದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ: ಸಿಎಂ

ಸದ್ಯದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ: ಸಿಎಂ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಪೊಲೀಸ್ ಪೇದೆಗಳಿಗೆ ಗೌರವ ಸಲ್ಲಿಸಿದರು.

ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು, ಸದ್ಯದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂ. ರಿಲೀಸ್ ಮಾಡಲಾಗಿದೆ. ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಕರ್ತವ್ಯ ನಿರತ ಸಾವನ್ನಪ್ಪಿದ ಪೊಲೀಸರಿಗೆ 50 ಲಕ್ಷ ರೂ. ಪರಿಹಾರ ಕೊಡಲಾಗುತ್ತೆ ಎಂದು ಹೇಳಿದರು.

Related