ತಿರಸ್ಕರಿಸಿದ ವರ ಯುವತಿ ಆತ್ಮಹತ್ಯೆ

ತಿರಸ್ಕರಿಸಿದ ವರ ಯುವತಿ ಆತ್ಮಹತ್ಯೆ

ಚಾಮರಾಜನಗರ : ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಣೆ ಮಾಡಿದ್ದಾನೆ ಎಂದು ಮನನೊಂದ ಯುವತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನ ಹೊನ್ನೂರಿನ ಬೀಚಹಳ್ಳಿ ಗ್ರಾಮದಲ್ಲಿ ನಡೆದಿದೆ.

ನೇಣಿಗೆ ಶರಣಾದ ಯುವತಿ ನಂದಿನಿ (19)ಎಂದು ಗುರುತಿಸಲಾಗಿದೆ. ನಂದಿನಿ ಅದೇ ಗ್ರಾಮದ ಯೋಗೇಶ್ ಎಂಬಾತನನ್ನ ಪ್ರೀತಿಸುತ್ತಿದ್ದಳು. ಇಬ್ಬರಿಂದಲೂ ಪ್ರೀತಿಗೆ ಒಪ್ಪಿಗೆ ಇತ್ತು. ಅಲ್ಲದೆ ಇಬ್ಬರು ಪ್ರೀತಿಸುತ್ತಿದ್ದ ವಿಚಾರ ಮನೆಯವರಿಗೆ ತಿಳಿದು ಮದುವೆ ಮಾಡಿಕೊಡಲು ಕುಟುಂಬಸ್ಥರು ಕೂಡ ಒಪ್ಪಿಕೊಂಡಿದ್ದರು.

ಈ ಮಧ್ಯೆ ಯೋಗೇಶ್‌ಗೆ ಪೊಲೀಸ್ ಕೆಲಸ ಸಿಕ್ಕಿತ್ತು. ಕೆಲಸ ಸಿಗುತ್ತಿದಂತೆ ಯೋಗೇಶ್ ತನ್ನ ವರಸೆ ಬದಲಾಯಿಸಿದ್ದಾನೆ. ನಂದಿನಿಗೆ ಮದುವೆ ಯಾಗಲು ನಿರಾಕರಿಸಿದ್ದಾನೆ.

ಪ್ರಿಯತಮನ ಹೊಸ ವರಸೆಯಿಂದ ಮನನೊಂದ ನಂದಿನಿ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಸಂಬAಧ ನಂದಿನಿ ಪೋಷಕರು ಯಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Related