ಮಂಡ್ಯ,ಆ 02 : ವರುಣನ ಅರ್ಭಟಕ್ಕೆ ಜನ ಕಂಗಾಲಾಗಿದ್ದು, ಮಂಡ್ಯದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತವಾರಿ ಸಚಿವ ಕೆ. ಗೋಪಾಲಯ್ಯರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾತನೂರಿನಲ್ಲಿ ಕೆರೆ ಕೋಡಿ ಒಡೆದು ರಸ್ತೆಗಳು ಕೊಚ್ಚಿ ಹೋಗಿದ್ದು, ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರು ಹಾನಿಗೊಳಗಾಗಿದ್ದಾರೆ.
ಉಮ್ಮಡಹಳ್ಳಿಯಲ್ಲಿ ಮನೆಗಳು ಕುಸಿದು 40 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವುದನ್ನು, ಪರಿಶೀಲನೆ ನಡೆಸಿ, ನಷ್ಟಕ್ಕೊಳಗಾದವರಿಗೆ ಸ್ಥಳದಲ್ಲೇ 90 ಸಾವಿರ ಪರಿಹಾರ ಚೆಕ್ ವಿತರಿಸಿದ ಸಚಿವ ಕೆ. ಗೋಪಾಲಯ್ಯ.
ಈ ಸಂದರ್ಭದಲ್ಲಿ ರೇಷ್ಮೆ ಮತ್ತು ಯುವಜನ ಸಬಲೀಕರಣ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ಎಸ್ ಅಶ್ವಥಿ, ಎಸ್ಪಿ ಯತೀಶ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.