ಕಲಬುರಗಿ : ದೇಶಾದ್ಯಂತ 72ನೇ ಗಣರಾಜ್ಯೋತ್ಸವವನ್ನ ಸರಳವಾಗಿ ಆಚರಿಸಲಾಯಿತು. ಕಲಬುರಗಿಯ ಡಿಎಆರ್ ಮೈದಾನದಲ್ಲಿ ಏರ್ಪಡಿಸಿದ್ದ
ಗಣರಾಜ್ಯೋತ್ಸವ ಸಮಾರಂಭಕ್ಕೆ ಆಹಾರ, ನಾಗರೀಕ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿ ಧ್ವಜಾರೋಹಣ ನೆರವೇರಿಸಿದರು.
ಇನ್ನು ಧ್ವಜಾರೋಹಣ ಬಳಿಕ ಸಚಿವ ಉಮೇಶ್ ಕತ್ತಿ ತೆರೆದ ವಾಹನದಲ್ಲಿ ಪಥ ಸಂಚಲನ ವೀಕ್ಷಿಸಿದ್ರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಕೂಡ ನಡೆಯಿತು.
ಈ ಸಂರ್ಭದಲ್ಲಿ ಸಂಸದ ಉಮೇಶ್ ಜಾಧವ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಪಾಟೀಲ್ ರೇವೂರ, ಎನ್.ಇ.ಕೆ.ಆರ್.ಟಿ.ಸಿ ಅಧ್ಯಕ್ಷ ರಾಜಕುಮಾರ್ ಪಾಟೀಲ ತೇಲ್ಕೂರ ಸೇರಿ ಹಲವರು ಉಪಸ್ಥಿತರಿದ್ದರು.