ರಿಪಬ್ಲಿಕ್ ಸಿಇಒಗೆ ಜಾಮೀನು

ರಿಪಬ್ಲಿಕ್ ಸಿಇಒಗೆ ಜಾಮೀನು

ಮುಂಬೈ : ಟಿಆರ್ ಪಿ ತಿರುಚಿದ ಪ್ರಕರಣದಲ್ಲಿ ಮುಂಬೈ ಪೆÇಲೀಸರಿಂದ ಬಂಧಿಸಲ್ಪಟ್ಟಿದ್ದ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ.

ಟಿಆರ್ ಪಿ ತಿರುಚಿದ ಪ್ರಕರಣದಲ್ಲಿ ಭಾನುವಾರ ಬೆಳಗ್ಗೆ ಮುಂಬೈ ಪೆÇಲೀಸ್ ಕ್ರೈಂ ಬ್ರಾಂಚ್ ನಿಂದ ಬಂಧನಕ್ಕೊಳಗಾದ ಹಿನ್ನೆಲೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಮರುದಿನವೇ ಈ ಬೆಳವಣಿಗೆ ನಡೆದಿದೆ. ತಲೋಜಾ ಜೈಲಿನಲ್ಲಿ ರಾತ್ರಿ ಕಳೆದ ನಂತರ ವಿಕಾಸ್ ಖನ್ಚಾಂದಾನಿ ಇಂದು ಸಂಜೆ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಾಗಿದ್ದರೂ, ಡಿಸೆಂಬರ್ 13ರಂದು ಬೆಳಗ್ಗೆ 8.30ಕ್ಕೆ ನಕಲಿ ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ವಿಕಾಸ್ ಖನ್ಚಾಂದನಿ ಅವರನ್ನು ಅವರ ನಿವಾಸದಿಂದ ಬಂಧಿಸಲಾಗಿತ್ತು. ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ನ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಸಿಂಗ್ 26 ದಿನಗಳ ಕಾಲ ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.

Related