ಬೆಂಗಳೂರು, ಜುಲೈ 19; ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಭೇಟಿಯಾಗಿ ಈ ಕುರಿತು ಸಂಸದರು ಮನವಿ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ಲಘು ವಾಹನ ಪ್ರಯಾಣಿಕರು ಸಕಲೇಶಪುರ-ಆನೆಮಹಲ್-ಕ್ಯಾನಹಳ್ಳಿ-ಚಿನ್ನಳ್ಳಿ-ಕಡಗರವಳ್ಳಿ-ಮಾರನಹಳ್ಳಿ ಮೂಲಕ ಶಿರಾಡಿ ಘಾಟ್ ಸಂಪರ್ಕ ಸಾಧಿಸಿ ಮಂಗಳೂರಿಗೆ ತೆರಳಬೇಕು. ಈ ಎರಡೂ ಮಾರ್ಗಗಳಲ್ಲಿ ಏಕಮುಖ ಸಂಚಾರವನ್ನು ಮಾತ್ರ ಮಾಡಬಹುದಾಗಿದೆ.