ವಿದ್ಯಾರ್ಥಿ ವೇತನ ನೀಡಲು ಆಗ್ರಹ

ವಿದ್ಯಾರ್ಥಿ ವೇತನ ನೀಡಲು ಆಗ್ರಹ

ಗಂಗಾವತಿ : ನಗರದ ಕೇಂದ್ರೀಯ ಬಸ್ ನಿಲ್ದಾಣದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಶಾಲಾ ಕಾಲೇಜು ನಾಲ್ಕೈದು ನೂರು ವಿದ್ಯಾರ್ಥಿಗಳು ಎಸ್‌ಎಫ್‌ಐ ಸಂಘಟನೆ ಸಹಯೋಗದಲ್ಲಿ ಧರಣಿ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದರು.

ಎಸ್‌ಎಫ್‌ಐ ತಾಲೂಕು ಘಟಕ ಅಧ್ಯಕ್ಷ ಜ್ಞಾನೇಶ ಕಡಗದ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೈಸ್ಕೂಲು ಮತ್ತು ಕಾಲೇಜುಗಳಿಗೆ ಓಡಾಡಲು ಬಸ್ ಪಾಸಿನ ತೊಂದರೆಯಾಗಿದ್ದು ಬಸ್ ಪಾಸ್ ಕೊಡುವ ವ್ಯವಸ್ಥೆಯನ್ನು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವುದನ್ನು ನಿಷೇಧಿಸಬೇಕು ಮತ್ತು ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ 4 ರಿಂದ 5 ನೂರು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದರು.

Related