ನಿವಾಸಿಗಳ ಗೋಳು ಕೇಳೋರೇ ಇಲ್ಲ

ನಿವಾಸಿಗಳ ಗೋಳು ಕೇಳೋರೇ ಇಲ್ಲ

ಬೈಲಹೊಂಗಲ: ಮೂಲಭೂತ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಬೈಲಹೊಂಗಲದ ಮಹಾತ್ಮ ಗಾಂಧಿ ಹೌಸಿಂಗ್ ಕಾಲೋನಿ ನಿವಾಸಿಗಳು ಈಟಿ ಬಸವೇಶ್ವರ ದೇವಸ್ಥಾನದ ಎದುರು ಪ್ರತಿಭಟನೆ ನಡೆಸಿದರು.

ದೇವಸ್ಥಾನದ ಎದುರುಗಡೆಯ ಮುಖ್ಯರಸ್ತೆ, ರೈತರು ಜಮೀನಿಗೆ ತೆರಳುವ ರಸ್ತೆ, ಚರಂಡಿ ಹಾಗೂ ವಿದ್ಯುತ್ ದೀಪ ಸಂಪೂರ್ಣ ಹಾಳಾಗಿದ್ದು ಸರಿಪಡಿಸುವಂತೆ ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಮನವಿ ಆಲಿಸಿದ ಪುರಸಭೆ ಮುಖ್ಯಾಧಿಕಾರಿ ಕೆಐ ನಾಗನೂರ ಅವರು, ಶೀಘ್ರದಲ್ಲೇ ಸಂಬಂಧಪಟ್ಟ ಆಯಾ ಇಲಾಖೆಯನ್ನು ಸಂಪರ್ಕಿಸಿ ಮೂಲಭೂತ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

Related