ದೇವರ ಹೆಸರಿನಲ್ಲಿ ರೇವಂತ್​ ರೆಡ್ಡಿ ಪ್ರಮಾಣ ವಚನ

ದೇವರ ಹೆಸರಿನಲ್ಲಿ ರೇವಂತ್​ ರೆಡ್ಡಿ ಪ್ರಮಾಣ ವಚನ

ಪಂಚ ರಾಜ್ಯಗಳ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಮುಡಿಗೇರಿದೆ. ಹೌದು ತೆಲಂಗಣ ರಾಜ್ಯದಲ್ಲಿ ಬಹುಮತದಿಂದ ಗೆದ್ದು, ಇಂದು ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ

ತೆಲಂಗಾಣ  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್​ ಶಾಸಕ ಎನುಮುಲ ರೇವಂತ್ ರೆಡ್ಡಿ ಅವರುಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದೆ. ಕಾಂಗ್ರೆಸ್‌ನ ಎಲ್ಲಾ ಪ್ರಮುಖ ನಾಯಕರು ಆಗಮಿಸಿದ್ದರಿಂದ ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಬೆಳಗ್ಗೆಯಿಂದಲೇ ಕಾಂಗ್ರೆಸ್ ಕಾರ್ಯಕರ್ತರು ಕ್ರೀಡಾಂಗಣಕ್ಕೆ ಬರಲಾರಂಭಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಅತಿಥಿಗಳನ್ನು ರಂಜಿಸಲು 500 ಕಲಾವಿದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಮಧ್ಯಾಹ್ನ ಒಂದು ಗಂಟೆ ನಾಲ್ಕು ನಿಮಿಷಕ್ಕೆ ರೇವಂತ್ ರೆಡ್ಡಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

Related