ಬೆಂಗಳೂರು, ಜೂ 25 : ಅರಕೆರೆ ವಾರ್ಡ್ 193 ರ ಬಿಡಿಎ ಬಡಾವಣೆಯಲ್ಲಿನ ರಸ್ತೆಯ ಡಾಂಬರೀಕರಣಕ್ಕೆ ಚಾಲನೆ ನೀಡಲಾಯಿತು ಹಾಗೂ ವಾರ್ಡಿನ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವ ಅನುದಾನವನ್ನು ಒದಗಿಸುವ ಕುರಿತು ಭರವಸೆಯನ್ನು ನೀಡಲಾಯಿತು ಹಾಗೂ ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳ ಕುರಿತು ಚರ್ಚಿಸಲಾಯಿತು
ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀ ರವಿ ಪುರುಷೋತ್ತಮ ರವರು ಮಾಜಿ ನಗರಸಭಾ ಸದಸ್ಯರಾದ ಶ್ರೀ ಮುರಳಿ ರವರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.